ಮಂಗಳವಾರ, ಏಪ್ರಿಲ್ 30, 2013

ಡಾ,ಶಿವಾನಂದ ಕುಬಸದ : ಹನಿಗವಿತೆ.





ಹನಿಗವಿತೆ : 












ಡಾ.ಶಿವಾನಂದ ಕುಬಸದ

ಸ್ವರ್ಣ ಲಂಕೆಗೆ ಅಂದು ಹತ್ತಿದ ಬೆಂಕಿ
ಇಂದಿಗೂ ಹೋಗಿಲ್ಲ ಸಂಪೂರ್ಣ ನಂದಿ
ಯಾಕೆಂದರೆ ಈಗಲೂ ಇದ್ದಾರೆ ಬಾಲಕ್ಕೆ 
ಬೆಂಕಿಯಿಟ್ಟು ಮೋಜು ನೋಡುವ ಮಂದಿ


          ***

ಪ್ರವೀಣಕುಮಾರ ದೈವಜ್ಞಾಚಾರ್ ಅವರ ಕವಿತೆಗಳು.

        ಕವನ ಸಿರಿ :


             

                      ಪ್ರವೀಣಕುಮಾರ ದೈವಜ್ಞಾಚಾರ್


ಅತ್ತೂ ಕರೆದು
ರಂಪ ಮಾಡುವ ಮಗುವೆ
ನಿನಗೇಕೆ ಹಿಡಿಯಲಾಗದ
ಬಣ್ಣದ ಚಿಟ್ಠೆಯ ಗೊಡವೆ
ನೀ
ಕೇಳುವಿಯಾದರೆ ನನ್ನ ಮೊರೆ
ನೋಡುತ್ತಿರು, ಹಾರಿಬಿಡುವೆ
ಚಿಟ್ಟೆಯಾಗಿ ನಿನ್ನ ಕಣ್ಣೆದುರೆ

******


ನೀ ನನ್ನೊಡನಿರಲು
ಮಾತನಾಡುತ್ತಲೇ ಇರಬೇಕೆಂಬ
ನಿಯಮವಿಲ್ಲ ಗೆಳತಿ,
ಸುಮ್ಮನಿದ್ದರೂ ಆದೀತು
ಮಾತು ಬರದ ಮಗುವಿನಂತೆ
*****


ಆಗಸಕ್ಕೆ ಕೈಚಾಚಿ

ತುದಿ ಬೆರಳಲ್ಲೆ ಕೂಡಿಸುವೆ
ಚುಕ್ಕೆಗಳನು

ಕೂಡದ ಸುಖಕ್ಕೆ
ಮನಸು ಹಲುಬುತ್ತದೆ

***

ಅಂಗೈಯಗಲ
ಹರಿವ ನೀರಿಗೆ
ಕೈಯೊಡ್ಡಿ ನಿಲುವೆ

ಬೆರಳ ಸಂದಿಯಲಿ
ತೂರಿ ಹೋಗುವಎಚ್ಚರಿಕೆ!

*****

ಕನಸಲ್ಲಿ ಬಂದವಳೆ
ಎದೆಯಲ್ಲಿ ನಿಂತವಳೆ
ನಿನಗೊಂದು ಮಾತು ಹೇಳುವುದಿದೆ

ಕನಸು ಹೃದಯಗಳೆರಡೂ
ನಿನ್ನವಲ್ಲ, ಇಲ್ಲಿ
ಅತಿಕ್ರಮಣ ನಿಷೇಧವಿದೆ!
-ಪ್ರವೀಣಕುಮಾರ ದೈವಜ್ಙಾಚಾರ್.

ಭಾನುವಾರ, ಏಪ್ರಿಲ್ 28, 2013

ಕನ್ನಡ ಸಾಹಿತ್ಯ ಚರಿತ್ರೆಯ ಪುನರಾವಲೋಕನ


     

 
  ಜಾನಪದದ ಮೂಲಕ ಮುರಿದು ಕಟ್ಟಬೇಕಾದ ಕನ್ನಡ ಸಾಹಿತ್ಯ ಚರಿತ್ರೆ

                                          ಡಾ.ಪ್ರಕಾಶ ಗ.ಖಾಡೆ
         
  ಕನ್ನಡದಲ್ಲಿ ಹದಿನೇಳನೆಯ ಶತಮಾನದಿಂದ ಹತ್ತೊಂಬತ್ತನೆಯ ಶತಮಾನದ ಕೊನೆಯವರೆಗೆ ಸಾಹಿತ್ಯ ರಚನೆಯ ‘ಕಗ್ಗತ್ತಲ ಕಾಲ’ ಎಂದು ಹೇಳಿಕೊಂಡು ಬರಲಾಯಿತು. ‘ಇಂಗ್ಲಿಷ್ ಗೀತಗಳು’ ಕೃತಿ ಬರುವುದಕ್ಕಿಂತ ಮೊದಲು ಕನ್ನಡ ಕವಿತೆಯ ಸ್ಥಿತಿ ಹೇಗಿತ್ತೆಂದು ಸ್ವಲ್ಪಮಟ್ಟಿಗೆ ನೆನೆದರೆ ಅದರ ಪ್ರಭಾವ ಚೆನ್ನಾಗಿ ಮನದಟ್ಟಾಗುತ್ತದೆ. “ಕನ್ನಡದಲ್ಲಿ ಪ್ರೌಢಕಾವ್ಯ ರಚನೆ ಸುಮಾರು ಹದಿನೇಳುನೂರರ ವೇಳೆಗೆ ಚಿಕ್ಕದೇವರಾಯ ಒಡೆಯರ ಆಳ್ವಿಕೆಯ ಕೊನೆಯ ಹೊತ್ತಿಗೆ ನಿಂತು ಹೋಗಿತ್ತು. ಅಲ್ಲಿಂದ ಮುಂದೆ ದೌರ್ಬಲ್ಯ, ಅಸಾರತೆ, ಅನ್ಯಾಕ್ರಮಣ ಮೊದಲಾದವು ರಾಜಕೀಯ ಪ್ರಪಂಚದಲ್ಲಿ ಕಾಣಿಸಿಕೊಂಡಂತೆಯೇ ಸಾಹಿತ್ಯ ಪ್ರಪಂಚದಲ್ಲಿಯೂ ಕಾಣಿಸಿಕೊಂಡವು” ಎಂಬುದು ತೀನಂಶ್ರೀ ಅವರ ಹೇಳಿಕೆ. ಹದಿನೆಂಟನೆಯ ಶತಮಾನದ ಸಾಹಿತ್ಯವು ಮುನ್ನಿನಷ್ಟು ಸತ್ವಪೂರ್ಣವಾಗಿ ಹೊರಹೊಮ್ಮಲಿಲ್ಲ. ಅದಕ್ಕೆ ದೇಶದ ಸ್ಥಿತಿಗತಿಯೇ ಕಾರಣ. ಈ ಶತಮಾನದಲ್ಲಿ ಕರ್ನಾಟಕವನ್ನು ಬಲಿಷ್ಠÀವಾದ ರಾಜಮನೆತನವಾವುದೂ ಆಳುತ್ತಿರಲಿಲ್ಲ. ಸಾಲದಕ್ಕೆ ಪೇಶವೆ, ನಿಜಾಮ ಮುಂತಾದ ಅನ್ಯ ಭಾಷಿಕÀರ ರಾಜಸತ್ತೆಯಲ್ಲಿ ಕನ್ನಡದ ಅನೇಕ ಪ್ರದೇಶಗಳು ಸಿಕ್ಕಿಕೊಂಡಿದ್ದವು. ಕವಿಬಳ್ಳಿಗಳಿಗೆ ಬಿದಿರಿನ ಹಂದರವನ್ನಾದರೂ ಒದಗಿಸಿದ್ದ ಮೈಸೂರಲ್ಲಿ ಚಿಕ್ಕದೇವರಾಯ£ರ ಯೋಗ್ಯತೆಯುಳ್ಳ ಅರಸರು ಮುಂದಿನ ಒಂದು ಶತಮಾನದವರೆಗೆ ಯಾರೂ ಕಾಣಿಸಿಕೊಳ್ಳಲಿಲ್ಲ. ಹೈದರ, ಟಿಪ್ಪುಸುಲ್ತಾನರ ರಾಜ್ಯಭಾರದಲ್ಲಿ ನಡೆದ ಸಂಸ್ಕøತಿ ಸಂವರ್ಧನೆಯು ಹೇಳಿಕೊಳ್ಳುವಂತಹದೇನಲ್ಲ ಎಂದು ಶ್ರೀನಿವಾಸ ಹಾವನೂರ ಅವರು ತಮ್ಮ ‘ಹೊಸಗನ್ನಡ ಅರುಣೋದಯ’ದಲ್ಲಿ  ದಾಖಲಿಸುತ್ತಾರೆ.
    ಆದರೆ ಈ ಕಾಲಕ್ಕೆ ಇವೆಲ್ಲ ಸಾಹಿತ್ಯಿಕ ಚಟುವಟಿಕೆಗಳು ನಾಡಿನ ದಕ್ಷಿಣ ಭಾಗಕ್ಕೆ ಮೀಸಲಾಗಿದ್ದರೆ ಉತ್ತರದ ಆಗಿನ ನಿಜಾಮ ಕರ್ನಾಟಕದಲ್ಲಿ ಕೆಲವು ಪ್ರಸಿದ್ಧ ಹರಿದಾಸರು ಆಗಿ ಹೋದರು. ಕರ್ನಾಟಕ ಹರಿದಾಸ ಪರಂಪರೆಯಲ್ಲಿ ಪುರಂದರದಾಸ, ಕನಕದಾಸ, ವಿಜಯದಾಸ, ಗೋಪಾಲದಾಸ, ಜಗನ್ನಾಥದಾಸ ಮತ್ತು ಪ್ರಸನ್ನ ವೆಂಕಟದಾಸರು ಪ್ರಮುಖರು. ಇವರಲ್ಲಿ ಮೂವರು 18ನೆಯ ಶತಮಾನದಲ್ಲಿಯೇ ಬಾಳಿದವರು. ಪ್ರಸನ್ನ ವೆಂಕಟದಾಸರು, ವಿಜಯದಾಸರು, ಗೋಪಾಲದಾಸರು ಒಬ್ಬೊಬ್ಬರು ಮಹಾಮಹಿಮರು. ಇವರೆಲ್ಲರಲ್ಲಿ ಕವನ ಸ್ಪೂರ್ತಿಯು ಸಹಜವಾಗಿ ಹೊರಹೊಮ್ಮಿ ಸಾವಿರಾರು ಹಾಡುಗಳ ಸೃಷ್ಟಿಯಾಯಿತು. ಹಾಡು ಕೀರ್ತನೆಗಳಲ್ಲದೆ ಕಥನ ಕವನಗಳನ್ನು ರಚಿಸಿದವರಿದ್ದಾರೆ, ಬಯಲಾಟಗಳ ಪ್ರಸಂಗ ಪಠ್ಯಗಳನ್ನು ಕಟ್ಟಿದವರಿದ್ದಾರೆ. ಸಮಸ್ತ ದಾಸ ಪೀಳಿಗೆಯವರ ಅನೇಕ ಹಾಡುಗಳು ಈ ಮುನ್ನವೆ ಮುದ್ರಿತವಾಗಿ ಅವುಗಳ ಸಮೀಕ್ಷೆ ವಿಮರ್ಶೆಗಳು ನಡೆದು ಹೋಗಿದ್ದರೆ ಈ ಶತಮಾನವನ್ನು ಕತ್ತಲೆಯ ಕಾಲವೆಂದೂ ಯಾರೂ ಹೇಳುತ್ತಿರಲಿಲ್ಲ. ವಿಜಯದಾಸ, ಗೋಪಾಲದಾಸರ ಭಾವಪೂರ್ಣ ಸುಳಾದಿಗಳು ಮತ್ತು ಜಗನ್ನಾಥದಾಸರ ‘ಹರಿಕಥಾಮೃತಸಾರ’ ಇವುಗಳನ್ನು ಕನ್ನಡಕ್ಕೆ ನೀಡಿದ 18ನೆಯ ಶತಮಾನ ಅದೆಂತು ನಿಸ್ಸತ್ವವೆನಿಸಿತು? ಎಂಬ ಹಾವನೂರ ಅವರ ಮಾತುಗಳು ಕನ್ನಡವನ್ನು ಅಖಂಡವಾಗಿ ಕಾಣುವ ಮತ್ತು ಒಂದು ಭಾಗದ ಕೊಡುಗೆಯನ್ನು ಕತ್ತಲಲ್ಲಿಟ್ಟು ನೋಡುವ ತಿಳುವಳಿಕೆಗಳನ್ನು ಎಚ್ಚರಿಸಿದಂತಿದೆ.
ಆದರೆ ಈ ತಿಳುವಳಿಕೆಗಳಿಗೆ ಉತ್ತರವಾಗಿ ಕರ್ನಾಟಕದ ಉತ್ತರ ಭಾಗದಲ್ಲಿ ನಡೆದ ಕನ್ನಡ ಕಾವ್ಯದ ದೇಸೀ ಕಾಣ್ಕೆಗಳನ್ನು ದಾಖಲಿಸುವ ಮೂಲಕ ಕನ್ನಡ ಸಾಹಿತ್ಯದ ಚರಿತ್ರೆಯನ್ನು ಮುರಿದು ಕಟ್ಟಬೇಕಾಗಿದೆ.
ಹೊಸಗನ್ನಡದ ಅರುಣೋದಯವನ್ನು ಗುರುತಿಸುವಾಗಲೂ ಜನಪದೀಯ ನೆಲೆಗಟ್ಟಿನಿಂದ ಬಂದ ಲಾವಣಿ, ತತ್ವಪದ, ಭಜನೆ ಮೊದಲಾದ ಕಾವ್ಯಗಳನ್ನು ಮತ್ತೆ ದೂರಸರಿಸಲಾಗಿರುವುದೂ ಒಂದು ದುರಂತವೆನಿಸುತ್ತದೆ. ‘ಹೊಸಗನ್ನಡದ ಅರುಣೋದಯವನ್ನು ಕೆಂಪು ನಾರಾಯಣ, ಮುದ್ದಣರಿಂದ ಆರಂಬಿsಸಿ ಹಟ್ಟಿಯಂಗಡಿ ನಾರಾಯಣರಾಯರು, ಬಿ.ಎಂ.ಶ್ರೀ. ಅವರ ರಚನೆಗಳಿಂದ ಗುರುತಿಸುವುದು ನಮಗೆ ವಾಡಿಕೆಯಾಗಿದೆ. ಆದರೆ ವಾಸ್ತವವಾಗಿ ಹೊಸಗನ್ನಡದ ಅರುಣೋದಯವನ್ನು ತತ್ತ್ವಪದಗಳು ಮತ್ತು ತತ್ತ್ವಪದಕಾರರಿಂದಲೇ ಆರಂಬಿsಸಬೇಕಾಗಿದೆ.’ಎಂಬುದು ಕಿ.ರಂ.ನಾಗರಾಜ ಅವರ ಚಿಂತನೆ. ಜನಪದ ಸಾಹಿತ್ಯವಾಗಲಿ, ವಚನ ಸಾಹಿತ್ಯವಾಗಲಿ ಪೂರ್ವಧ್ಯಾನಿತವಾದ ಅಥವಾ ಪ್ರe್ಞÁಪೂರ್ವಕವಾದ ಕಾವ್ಯಸೃಷ್ಟಿಯಲ್ಲ. ಇವರಾರಿಗೂ ತಮ್ಮ ರಚನೆಗಳು ಸಾಹಿತ್ಯವೆಂಬ ಭ್ರಮೆ ಇರಲಿಲ್ಲ. ವಚನಗಳು ಸೃಷ್ಟಿಯಾದ 500 ವರ್ಷಗಳ ನಂತರ ಅದಕ್ಕೆ ಸಾಹಿತ್ಯವೆಂಬ ಮನ್ನಣೆ ಲಬಿsಸಿದೆ. ಅಂತೆಯೇ ಭಾರತವು ವಸಾಹತುಶಾಹಿ ಪ್ರಕ್ರಿಯೆಗೆ ಒಳಪಟ್ಟಿದ್ದಾಗ ಮೂಡಿ ಬಂದ ಕನ್ನಡದ ತತ್ವಪದಗಳು ಮತ್ತು ತತ್ವಪದಕಾರರು ಇದುವರೆಗೆ ಪ್ರಕಟವಾಗಿರುವ ಸಾಹಿತ್ಯ ಚರಿತ್ರೆಯ ಪ್ರತಿಷ್ಠಿತ ಗ್ರಂಥಗಳಲ್ಲಿ ಸ್ಥಾನಗಿಟ್ಟಿಸಿಲ್ಲದಿರುವುದು ಕಾಣುತ್ತೇವೆ.
ಇಲ್ಲಿ ನಡೆದ ದೇಸೀ ಕಾವ್ಯ ಪ್ರಕ್ರಿಯೆಯು ತೀನಂಶ್ರೀ ಅವರ ಗಮನಕ್ಕೆ ಬಾರದೇ ಹೋಗಿರುವುದು ಈ ಕಾಲವನ್ನ ‘ಅಸಾರತೆ’ ಎಂದು ಸಾರಲಾಯಿತು. 18, 19ನೆಯ ಶತಮಾನಗಳು ಕನ್ನಡದಲ್ಲಿ ಅಪಾರ ಸಂಖ್ಯೆಯ ಕಥನಗೀತಗಳೂ, ಲಾವಣಿಗಳೂ, ಮಹಾಕಾವ್ಯಗಳೂ, ತತ್ವಪದಗಳೂ ರಚನೆಯಾದ ಕಾಲ ಎಂಬುದು ತೀನಂಶ್ರೀ ಅವರಿಗೆ ಯಾಕೆ ಹೊಳೆಯಲಿಲ್ಲವೊ? ಅವರ ಕಾಲಕ್ಕೆ ಅಂತಹ ಸಾಹಿತ್ಯ ಸಂಗ್ರಹವೂ ಆಗಿತ್ತು. ಸ್ವತಃ ಅವರೂ ಜನಪದ ಸಾಹಿತ್ಯದ ಮೇಲೆ ಬರವಣಿಗೆ ಮಾಡಿದವರಾಗಿದ್ದರು ಬಹಳ ಸರಳವಾಗಿ ಇದು ಶಿಷ್ಟ ಸಾಹಿತ್ಯ ಚರಿತ್ರೆಕಾರರ ಪೂರ್ವಗ್ರಹಿಕೆ, ಅನಾಮತ್ತಾಗಿ ಇಂಗ್ಲಿಷ್ ರೊಮ್ಯಾಂಟಿಕ್ ಕೃಷಿ ಮಾಡಲಾರಂಬಿsಸಿದ ಸಾಹಿತಿಗಳಿಗೆ, ವಿಚಾರವಂತರಿಗೆ ಸ್ಥಳೀಯವಾದ ಈ ಮೌಖಿಕ ಸಂಪ್ರದಾಯಗಳು ಮೈಲಿಗೆ ಎನಿಸಿದ್ದವು. ಇಂಗ್ಲಿಷಿನಲ್ಲಿ ವ್ಯವಹರಿಸುವುದೇ ಗೌರವ ಮತ್ತು ನಾಗರಿಕ ಲಕ್ಷಣ ಎನ್ನುವ ವಸಾಹತು ಪ್ರe್ಞÉ ಸ್ಥಳೀಯವಾದದ್ದನ್ನು ಉಪೇಕ್ಷೆಗೆ ಒಳಗಾಗುವಂತೆ ಮಾಡಿತು. ಇಂದಿನ ಸಂದರ್ಭದಲ್ಲಿ ನಿಂತು ಉಪಲಬ್ಧವಾಗುತ್ತಿರುವ ಸ್ಥಳೀಯ ಸಾಂಸ್ಕøತಿಕ ಆಕರಗಳ ಹಿನ್ನೆಲೆಯಲ್ಲಿ 18-19ನೆಯ ಶತಮಾನವನ್ನು ಪುನರಾವಲೋಕಿಸುವುದು ಜರೂರಾಗಿದೆ. ಹೀಗೆ ಬರಡು ಕಾಲವೆಂದು ಹೇಳಿಕೊಂಡು ಬರಲಾಗಿದ್ದ ಸಂದರ್ಭದಲ್ಲಿ ಇಲ್ಲಿ ಜನಪದ ನೆಲೆಗಟ್ಟಿನಲ್ಲಿ ಮೂಡಿಬಂದ ಸಾಹಿತ್ಯವನ್ನು ಒಪ್ಪಿಕೊಳ್ಳದೆ ಹಾಗೂ ಗುರುತಿಸಿ ಮನ್ನಣೆ ನೀಡದೆ ಹೋಗಲಾಯಿತು.
ಈ ಅಪಾಯಕಾರಿ ಚಿಂತನಾ ಕ್ರಮಗಳು ಹುಟ್ಟುಹಾಕಿದ ಸಂದರ್ಭಗಳು ಒಟ್ಟು ಜನಪದರ ಕಾಣ್ಕೆಯನ್ನು ನಿರ್ಲಕ್ಷಿಸಿದವು. ದೇಶಿಯ ಕಾವ್ಯವನ್ನೂ ಕಟ್ಟಿದ ಯಾರೂ ಆಧುನಿಕ ಚಿಂತಕರಿಗೆ ಶ್ರೇಷ್ಠರಾಗಿಕಾಣಲಿಲ್ಲ. ಹೋಗಲಿ ಅವರ ಮೌಲ್ಯಯುತ ಸಾಧನೆಗೆ ತಕ್ಕುದಾದ ಗೌರವವನ್ನೂ ಕೊಡಲಿಲ್ಲ. ಅಸಾರತೆ ಮತ್ತು ಸ್ಥಗಿತಗೊಂಡ ಕಾಲವೆಂದು ಹೇಳುವ ಕಾಲಘಟ್ಟದಲ್ಲಿಯೇ ಇವರು ಹುಟ್ಟುಹಾಕಿದ ದೇಸೀತನ ತನ್ನ ಶ್ರೇಷ್ಠತೆಯನ್ನು ಕಾಯ್ದುಕೊಂಡಿತ್ತೆಂದೆ ಹೇಳಬೇಕು. ಯಾಕೆಂದರೆ ಈ ಕಾಲಘಟ್ಟದಲ್ಲಿಯೇ ಸಾಧು ಸಂತರು, ತತ್ವ್ನ್ತಪದಕಾರರು, ಬುಡಕಟ್ಟು ನಾಯಕರು, ವಸಾಹತುಶಾಹಿ ವ್ಯವಸ್ಥೆಯ ವಿರುದ್ಧ, ಅದರ ಜೀವ ವಿರೋದಿs ನೆಲೆಗಳ ವಿರುದ್ಧ ತಮ್ಮ ತಮ್ಮ ಅನುಭಾವಿಕ ನೆಲೆಯಿಂದ ಲೋಕಾನುಭವದಿಂದ ಖಂಡಿಸಿದವರು, ಚಳುವಳಿ ಮಾಡಿದವರು. ಆ ಮೂಲಕ ವ್ಯಕ್ತಿ ಸ್ವಾತಂತ್ರ್ಯದ ಘನತೆಯನ್ನು, ಕೋಮು ಸೌಹಾರ್ದತೆಯನ್ನು ಎತ್ತಿ ಹಿಡಿದವರು. ಪ್ರಭುತ್ವ ವಿರೋದಿs ನೆಲೆಗಳನ್ನು ಎತ್ತಿ ಹಿಡಿದ ಇವರು ನವೋದಯ ಸಂದರ್ಭದ ಪ್ರಮುಖ ಧಾರ್ಮಿಕ ನಿಲುವಾದ ಧರ್ಮ ನಿರಪೇಕ್ಷಕ ನೆಲೆಗೆ ತಳಹದಿ ಹಾಕಿಕೊಟ್ಟವರು. ಈ ಸೆಳಕುಗಳು ಲಾವಣಿಕಾರರಿಗೂ ಪ್ರಮುಖ ಪ್ರೇರಣೆಯಾಗಿದ್ದವು. ಸ್ಥಳೀಯ ಚಾರಿತ್ರಿಕ ಹಾಗೂ ಸಾಂಸ್ಕøತಿಕ ಸಂಗತಿಗಳಿಗೆ ಮಹತ್ವಕೊಟ್ಟು ಜನರೊಡಲಿಂದ ಹುಟ್ಟಿಬಂದ ಸ್ವಾನುಭವ ಪ್ರಧಾನವಾದ ದೇಸೀ ಪರವಾಗಿ ಅರಳಿಕೊಂಡಿದ್ದ ಈ ನೀತಿ ಸಂಪ್ರದಾಯದಂಥ ಎಷ್ಟೊ ಸ್ಥಳೀಯ ಅಬಿsವ್ಯಕ್ತಿಗಳನ್ನು ಇಲ್ಲಿ ನಿರ್ಲಕ್ಷಿಸಲಾಯಿತು. ಪಾಶ್ಚಾತ್ಯ ಸಿದ್ಧಾಂತಗಳ ಮೇಲೆ ರೂಪುಗೊಂಡ ನವೋದಯ ಚಳುವಳಿಗಳು ಇಂಥ ದೇಸೀತನಗಳನ್ನು ಉಪೇಕ್ಷೆ ಮಾಡಿದವು. ಸಮಾಜಮುಖಿ ಚಲನೆಗಿಂತ ವ್ಯಕ್ತಿ ಕೇಂದ್ರಿತ ಚಿಂತನಾಕ್ರಮಕ್ಕೆ ಇಲ್ಲಿ ಪ್ರಾಧಾನ್ಯ ದೊರಕಿತು. ಹಳೆಯದೆಲ್ಲಾ ವಿಸ್ಮ್ನೃತಿಗೊಳಗಾಯಿತು ಎಂಬುದನ್ನು ಡಾ.ವೀರೇಶ್ ಬಡಿಗೇರ ಸ್ಪಷ್ಟವಾಗಿಯೇ ಗುರುತಿಸುತ್ತಾರೆ.
ಹೀಗೆ ಲಾವಣಿ, ತತ್ತ್ವಪದ ಮೊದಲಾದ ಸ್ಥಳೀಯ ಕಾವ್ಯ ಪ್ರಕಾರಗಳು ಒಂದೆಡೆ ಈ ನೆಲೆಯಲ್ಲಿ ತಮ್ಮ ಅಸ್ತಿತ್ವ ರೂಪಿಸಿಕೊಳ್ಳುವ ಹೊತ್ತಿನಲ್ಲಿ ನಾವು ಯಾವುದನ್ನೂ ಆಧುನಿಕವೆಂದು ಕರೆದುಕೊಂಡು ಬಂದೆವೋ, ಅವು ಈ ನೆಲದ ಇಂಥ ಪ್ರೇರಣೆಗಳಿಂದ ಹೊರತಾಗಲಿಲ್ಲ. ಒಂದೆಡೆ ಪಶ್ಚಿಮದ ಕಾವ್ಯರೂಪಗಳಿಂದ ಪ್ರಭಾವಿತರಾಗಿ ಅವುಗಳಿಗೆ ಸಂವಾದಿಯಾಗಿ ಹೊಸ ರೂಪಗಳನ್ನು ಕನ್ನಡದಲ್ಲಿ ಆವಿಷ್ಕಾರಮಾಡುವ ಪ್ರಯತ್ನಗಳು ಅನುವಾದ, ರೂಪಾಂತರ, ಅಳವಡಿಕೆ ಇತ್ಯಾದಿಗಳ ಮೂಲಕ ಕೆಲವರಿಂದ ಪ್ರಾರಂಭವಾದರೂ ಈ ಹೊಸ ರೂಪಗಳ ಒಳಕ್ಕೆ ತುಂಬಿಕೊಳ್ಳಬೇಕಾದ ಹೂರಣ ಈ ನೆಲದ ಮಣ್ಣಿನಿಂದ ಬೆಳೆದುಕೊಂಡಿದ್ದೇ ಆಗಿರಬೇಕೆಂಬ ತಿಳಿವು ಇಂಥ ಹಿನ್ನೆಲೆಯಲ್ಲಿತ್ತೆಂಬುದು ಮಹತ್ವದ ಸಂಗತಿಯಾಗಿದೆ. ಕನ್ನಡದಲ್ಲಿ ಕಾಲಕಾಲಕ್ಕೆ ಕಾಣಿಸಿಕೊಂಡ ಇಂಥ ಹೊಸ ರೂಪಗಳಿಗೆ ಜಾನಪದ ನೀಡಿದ ಪ್ರೇರಣೆ, ಪ್ರಭಾವಗಳು ಅದರ ಪ್ರಾಧಾನ್ಯವನ್ನು ಸಾರುತ್ತವೆ.
ಜನಪದ ಹಾಡು ಪರಂಪರೆಯಲ್ಲಿನ ಮೌಖಿಕ ಸೃಷ್ಟಿ ಕ್ರಿಯೆಯನ್ನು ಅಕ್ಷರ ಲೋಕಕ್ಕೆ ತಂದಾಗ ಅವುಗಳ ಪಠ್ಯೀಕರಣ ಜರುಗಿತು. ಸಂಗ್ರಹ, ಸಂಪಾದನೆಗಳು ನಡೆದಾಗ ಜನಪದ ಗೀತ ಪ್ರಕಾರಗಳು, ನಾಲಗೆಯಿಂದ ನಾಡವರಿಗೆ ಅಕ್ಷರ ರೂಪವಾಗಿ ಕಣ್ಣ ನೋಟಕ್ಕೆ ಸಿಕ್ಕಾಗ ಓದುವ, ಓದಿ ತಿಳಿದುಕೊಳ್ಳುವ ಬಗೆ ಸಾರ್ವತ್ರಿಕವಾಯಿತು. ಅವುಗಳ ಶ್ರೇಷ್ಠತೆಯ ಅರಿವಾಗತೊಡಗಿತು. ಹಳ್ಳಿಯ ಲಾವಣಿ ಸಾಂಗತ್ಯಗಳನ್ನು ಉತ್ಸಾಹಶಾಲಿಗಳು ಹೊಸದಾಗಿ ಕೂಡಿಸಿ ಪ್ರಕಟಿಸಿದಾಗಲೆಲ್ಲಾ ಸಾಹಿತ್ಯ ಬೆಳವಣಿಗೆಗೆ ಮಹೋಪಕಾರವಾಗಿದೆ. ಇಂಗ್ಲೆಂಡ್ ಮೊದಲಾದ ದೇಶಗಳಲ್ಲಿ ಈ ಬಗೆಯ ಕಾರ್ಯವು ಕವಿತೆಯ ಪುನರುಜ್ಜೀವನಕ್ಕೆ ಸಹಕಾರಿಯಾಯಿತು. ನಮ್ಮ ಸಾಹಿತ್ಯದಲ್ಲಿಯೂ ಅದಕ್ಕೆ ನಿದರ್ಶನವನ್ನು ಆಗಲೇ ಅಂಬಿಕಾತನಯದತ್ತರ ಪ್ರಣಯ ಗೀತೆಗಳಲ್ಲಿ ಗುರುತಿಸಬಹುದು. ಜನಪದ ಸಾಹಿತ್ಯದ ಸಂಗ್ರಹ, ಪ್ರಕಟಣ ಕಾರ್ಯಗಳಲ್ಲಿ ಧಾರವಾಡ ಗೆಳೆಯರ ಗುಂಪಿನ ಈ ಕವಿಗಳು ಹಳ್ಳಿಯ ಪದಗಳ ಜೀವಾಳವನ್ನು ಚೆನ್ನಾಗಿ ಹೀರಿ, ಅದನ್ನೇ ತಮ್ಮ ವಾಣಿಯಲ್ಲಿ ಆಡಿಸುತ್ತಿರುವುದು ಆಶ್ಚರ್ಯವೇನೂ ಅಲ್ಲ ಎಂಬುದನ್ನೇ ಮುಂದೆ ತೀನಂಶ್ರೀ ಅವರೇ ನಿರೂಪಿಸಬೇಕಾಯಿತು.
ಒಟ್ಟು ಈ ಚಿಂತನೆಗಳು ಕನ್ನಡ ಕಾವ್ಯ ಪಡೆದುಕೊಂಡು ಬಂದ ಪ್ರೇರಣೆ, ಪ್ರಭಾವಗಳಿಗೆ  ದೇಶೀಯ ಕಾಣ್ಕೆಯನ್ನು ದೂರವಿಟ್ಟು ನೋಡದೆ, ಅದರ ಒಳಗಡೆಯೇ ನಡೆಯುತ್ತಿದ್ದ ಈ ಚಲನಶೀಲತೆಯನ್ನು ಕಾವ್ಯದ ಜೀವಂತಿಕೆಗೆ ಕಾರಣವಾದ ಸಂದರ್ಭಗಳನ್ನು ಪುಷ್ಟೀಕರಿಸಿದಂತಾಗುತ್ತದೆ. “ವಸಾಹತೀಕರಣಗೊಂಡ ದೇಶಗಳಲ್ಲಿ ವಿಜೇತರ ಸಂಸ್ಕøತಿಯ ಮಾದರಿಗಳು ವಿವೇಚನೆಯಿಲ್ಲದೆ ಪಡೆಯುವಂತೆ ಸಾಹಿತ್ಯ ತತ್ವಗಳನ್ನು ಪಡೆದುಕೊಂಡಾಗ ನಿರ್ಮಾಣಗೊಳ್ಳುವ ಅತಂತ್ರಭಾವನೆಯೇ ದೇಶೀವಾದದ ಒಲವಿಗೆ ಕಾರಣವಾಗಿದೆ. ಕನ್ನಡ ನವೋದಯದ ಕೂಸನ್ನು ಶೆಲ್ಲಿ, ವಡ್ಸ್‍ವರ್ತ್, ಬ್ರಾಡ್ಲೆಯರ ಸಾಹಿತ್ಯತತ್ವಗಳ ತೊಟ್ಟಿಲು ಪೆÇರೆಯಿತು” ಎಂದು ಹೇಳುವ ರಹಮತ್ ತರೀಕೆರೆ  ಅವರು “ಆದರೂ ನವೋದಯದ ಬರಹಗಾರರು ದೇಶೀ ಪರಂಪರೆಯ ಹೊಕ್ಕಳು ಬಳ್ಳಿಯನ್ನು ಕತ್ತರಿಸಿಕೊಂಡಿರಲಿಲ್ಲ” ಎನ್ನುವಲ್ಲಿ ನವೋದಯಕ್ಕೆ ಜೀವ ಚೇತನವನ್ನು ದೇಶೀಯತೆಯೇ ನೀಡಿತೆನ್ನುವುದನ್ನು ಪ್ರಧಾನವಾಗಿ ಪ್ರಮಾಣಿಕರಿಸುವುದಿದೆ.
 “ಕನ್ನಡ ನವೋದಯ ಕಾವ್ಯ ರೂಪ ತಾಳುವ ಹೊತ್ತಿನಲ್ಲಿ ಎರಡು ಸಂಸ್ಕøತಿಗಳು ಮುಖಾಮುಖಿಯಾದದ್ದರ ಪರಿಣಾಮಗಳನ್ನು ಎದುರಿಸಬೇಕಾಯಿತು. ತನ್ನದು, ತಾನು ಎಂದು ಅನುಭವವಾಗುತ್ತಿದ್ದ ಕಾಲದಲ್ಲಿ, ಬೇರೊಂದು ದೇಶವು ನಮ್ಮ ಸ್ವಾತಂತ್ರ್ಯವನ್ನು ಕಿತ್ತುಕೊಂಡು ನಾವು ಗುಲಾಮರಾದುದರ ಪರಿಣಾಮಗಳು ಕಾಣಿಸಿಕೊಳ್ಳತೊಡಗಿದ ಕಾಲದಲ್ಲಿ ಎರಡೂ ಏಕಕಾಲಕ್ಕೆ ಭಾರತದಲ್ಲಿ ಸಂಭವಿಸಿದವು. ಕನ್ನಡಿಗರ ಮಟ್ಟಿಗೆ ಇವೆರಡನ್ನೂ ಸಾಹಿತ್ಯದಲ್ಲಿ ಸ್ವೀಕರಿಸಿ ಬದುಕಿನ ಸಂದರ್ಭದಲ್ಲಿಟ್ಟುಕೊಂಡ ಸಾಧನೆ ನವೋದಯ ಸಾಹಿತ್ಯದ್ದು, ಅಲ್ಲದೆ ಹಳೆಯದರಲ್ಲಿ ಹೊಸದನ್ನು ಒಂದುಗೂಡಿಸಿಕೊಂಡು ಹಿತಮಿತವಾದ ಹೊಸತನವನ್ನು ಸಾದಿsಸಬೇಕು ಎಂಬ ಸಮದೃಷ್ಟಿಯೂ ಈ ಸಾಹಿತ್ಯಕ್ಕೆ ಬಂದಿತು. ಕನ್ನಡ ಸಂಸ್ಕøತಿಯ ಉತ್ತಮಾಂಶಗಳಲ್ಲಿ ಸಾವಿರಾರು ವರ್ಷಗಳಿಂದ ಈ ದೃಷ್ಟಿ ಬೆಳೆದು ಬಂದಿತ್ತು. ಹೊಸತನ ಅತಿರೇಕಗಳಿಗೆ ಇದು ಬಹುಮಟ್ಟಿಗೆ ಕಡಿವಾಣಹಾಕಿತು. ಹೀಗೆ ಹೊರಗಿನ ಪ್ರಭಾವಗಳಿಗೆ ಒಳಗಿನ ಪ್ರೇರಣೆ ಮತ್ತು ಪರಂಪರೆಯಿಂದ ಬಂದ ಸಮನ್ವಯ ದೃಷ್ಟಿ ಇವು ಕೂಡಿಕೊಂಡು ಹೊಸಗನ್ನಡ ಸಾಹಿತ್ಯದ ಜನನಕ್ಕೆ ಕಾರಣವಾದವು. ನವೋದಯ ಕಾವ್ಯ ಈ ನೆಲದ ಒಳಗಿನ ಜೀವಸತ್ವ ಪಡೆದುಕೊಂಡು ರೂಪ ತಾಳುವ ಸಂದರ್ಭ ವಸಾಹತುಶಾಹಿಯ ಪ್ರಭಾವಿ ಅನುಕರಣೆ ಒಂದು ಬಗೆಯ ಸಂಕರಸೃಷ್ಟಿಗೆ ಕಾರಣವಾದುದ್ದನ್ನು ಸಾರುತ್ತದೆ.
ಜಾನಪದ ಎಲ್ಲವನ್ನೂ ಒಳಗೊಂಡದ್ದು ಇಲ್ಲಿ ಹಿಂದಿನಿಂದಲೂ ಪ್ರವಹಿಸಿಕೊಂಡು ಬಂದ ಜನಪದ ಕಾವ್ಯ ಪ್ರಕಾರಗಳು, ತತ್ವಪದಗಳು, ಲಾವಣಿ ಮೊದಲಾದ ಜನಪದ ಗೀತ ಪ್ರಕಾರಗಳಂತೆ ನವೋದಯ ಕಾವ್ಯ ದೈನಂದಿನ ಸರಳ ಸಾಧಾರಣ ಬದುಕೂ ಸಂಗತಿಯೂ ಕಾವ್ಯವಾಗಬಲ್ಲದು ಎಂಬುದನ್ನೂ ತೋರಿಸಿತು. ನವೋದಯ ಕವಿಗಳ ಭಾಷಾ ಸಾಮಗ್ರಿಯಲ್ಲಿ ಸಂಸ್ಕøತ, ಹಳಗನ್ನಡ, ಜಾನಪದ, ದೈನಂದಿನ ಶಿಷ್ಟ ಭಾಷೆ ಇತ್ಯಾದಿಗಳು ಮಿಳಿತವಾಗಿವೆ. ಜನಪದರು ಪ್ರಕೃತಿ ಆರಾಧಕರು. ಪ್ರಕೃತಿ ಅವರ ಉಸಿರು. ಪ್ರಕೃತಿಯ ಗಿಡ, ಮರ, ಹೊಳೆ, ಹಳ್ಳ, ಸೂರ್ಯ, ಚಂದ್ರ, ಕಲ್ಲು ಮಣ್ಣು ಅವರ ಆರಾಧನಾ ದೈವಗಳು. ಅದನ್ನು ತಮ್ಮ ಹಾಡುಗಳಲ್ಲಿ ಮನದಣಿಯೆ ಹಾಡಿ ಭಕ್ತಿಯ ಪರಾಕಾಷ್ಠೆಯನ್ನು ಜನಮಾನಸದಲ್ಲಿ ಪ್ರತಿಷ್ಠಾಪಿಸಿದರು. ನವೋದಯ ಕಾವ್ಯವು ಕಾವ್ಯವಸ್ತುವನ್ನು ಪ್ರಾಚೀನ, ಇತಿಹಾಸ, ಪುರಾಣಾದಿಗಳಿಂದ ನಿಸರ್ಗಕ್ಕೆ ಸ್ಥಳಾಂತರಿಸಿತು. ಮತಧರ್ಮದ ಸ್ಥಾನವನ್ನು ಸೌಂದರ್ಯಧರ್ಮ ಆಕ್ರಮಿಸಿಕೊಂಡಿತು. ಜನಪದರಂತೆ ನಿಸರ್ಗವೇ ನವೋದಯ ಕವಿಗಳ ಕಾವ್ಯ ಸಿದ್ದಿಗೆ ಮುಖ್ಯವಸ್ತುವಾಯಿತು.
           ಒಟ್ಟಾರೆ ಹೊಸಗನ್ನಡ ಕಾವ್ಯ ಹಂತ ಹಂತದಲ್ಲೂ ಪಾಶ್ಚಾತ್ಯ ಪ್ರೇರಣೆಯಿಂದಲೇ ಹೊಸ ರೂಪಗಳನ್ನು ಆವಿಷ್ಕಾರಗೊಳಿಸಿಕೊಂಡಿತೆನ್ನುವುದನ್ನು ಬದಿಗಿಟ್ಟು ಕನ್ನಡದ ಸಂದರ್ಭದಲ್ಲಿ  ಮೂಡಿದ , ಹಲವು ನೆಲೆಗಳಲ್ಲಿ ನಡೆದ ಪ್ರಯೋಗಗಳು ಮುಖ್ಯವಾಗಬೇಕಿದೆ. ಸ್ಥಳೀಯ ಕಾವ್ಯ ಸಂವಹನ ಉಂಟುಮಾಡಿದ ಜಾಗೃತಿಯ ಕಾರಣವಾಗಿ ಇಲ್ಲಿ ಕನ್ನಡ ಸಾಹಿತ್ಯ ಪರಂಪರೆಯ ಒಳಗಡೆ ನಡೆದ ಹೊಸ ಸಂಸ್ಕøತಿಯ ಬೇರಿನಾಳಕ್ಕೆ ಇಳಿದ ದೇಸೀ ಸಂಸ್ಕøತಿಯ ಜೀವರಸ ಒಟ್ಟು ಚೇತನಕ್ಕೆ ಕಾರಣವಾಯಿತು. ಹಾಗಾಗಿ ಹೊಸತನದ ವೈಭವೀಕರಣದಲ್ಲಿ ಮರೆಯಲ್ಲಿ ಉಳಿದ ಸ್ಥಳೀಯ ಕಾವ್ಯ ಪ್ರಕಾರಗಳನ್ನು ನಿರ್ಲಕ್ಷಿಸದೆ ಪ್ರಧಾನ ಆಕರವಾಗಿ ಕಾಣುವ ಮತ್ತು ದಾಖಲಿಸುವ ಕೆಲಸ ತುರ್ತು ನಡೆಯಬೇಕಾಗಿದೆ.    *                

ಶನಿವಾರ, ಏಪ್ರಿಲ್ 27, 2013

ಹನಿಗವಿತೆಗಳು : ನಿಷ್ಠಿ ರುದ್ರಪ್ಪ.




ಹನಿಗವಿತೆ: 

                                                                   ನಿಷ್ಠಿ ರುದ್ರಪ್ಪ,ಬಳ್ಳಾರಿ

ಇವತ್ತು ಎಲ್ಲಾರು ಹುಣ್ಣಿವಿ ಅಂತಾರ
ನನಗ ಹಂಗ ಅನಿಸುದೆ ಇಲ್ಲ
ಯಾಕಂದರ ಇವತ್ತು
ನಿನ್ನ ಪೋನು ಇಲ್ಲ ಮೆಸೇಜ್ ಇಲ್ಲ
ಅದಕ್ಕಾ ನನ್ನ ಮನಸ್ಸಿಗೆ ಅಮಾಸಿ ಕತ್ತಾಲಾಗೈತಿ
-ನಿಷ್ಠಿ ರುದ್ರಪ್ಪ
ನಿನ್ನ ಬೆರಳು ನೋಡು 
ಹ್ಯಾಂಗ ಎಳಿ ಬೆಂಡಿಕಾಯಿ ಆಗ್ಯಾವ
ಅದಕ್ಕ ಅವಕ್ಕ 
ಲೇಡಿಸ್ ಫಿಂಗರ್ ಅಂತ ಹೆಸರಿಟ್ಟರಾ
-ನಿಷ್ಠಿ ರುದ್ರಪ್ಪ

ಶುಕ್ರವಾರ, ಏಪ್ರಿಲ್ 26, 2013

ವಿದ್ಯಾ ಕುಂದರಗಿ : ಕವಿತೆಗಳು


                   ವಿದ್ಯಾ ಕುಂದರಗಿ ಅವರ ಕವಿತೆಗಳು

  
ಬೆಳೆಯುವ ಭೂಮಿಯಾದವರು
ಈ ಭುವಿಯಲ್ಲಿ
ಹಸಿರೊಂದೇ ಬೆಳೆಯುವುದಿಲ್ಲ.....
ಹಸಿವೂ ಬೆಳೆಯುತ್ತದೆ.
ಮಾವೋಂದೆ ಚಿಗುರುವುದಿಲ್ಲ.....
ಬೇವೂ ಚಿಗುರುತ್ತದೆ.
ಕೋಗಿಲೆಯೊಂದೇ ಕೂಗುವುದಿಲ್ಲ......
ಕಾಗೆ ಗೂಬೆಗಳು ಆಲಾಪಿಸುತ್ತವೆ.
ಬೆಳದಿಂಗಳಷ್ಟೇ ಬೀರುವುದಿಲ್ಲ......
ಬಿಸಿಲೂ ರಣಗುಡುತ್ತದೆ.

ಜಡಿ ಮಳೆ ಇಂಗಿ ಹೋಗಿ
ತಂಪು ಮಾತ್ರ ಉಳಿಯುವುದಿಲ್ಲ......
ಊರಿದ ಹೆಜ್ಜೆ ಕಿತ್ತೆಳಿಸಲು
ಕಸರತ್ತು ಬಯಸುವ
ಕೆಸರೂ ಉಳಿಯುತ್ತದೆ.

ಸಹಿಸಿ ಬದುಕುವ ಜನರಿದ್ದಾರೆ
ಬಿಸಿಲ ಚರ್ಮದಲೂ
ಶುಭ್ರ ಹೃದಯವಿದ್ದವರು .......
ಮಣ್ಣ ಹುಡಿಯಲ್ಲಿ ಹುಡಿಯಾಗಿ
ದುಡಿದು, ಧಣಿಕರಿಗೆ ಸರಕಾಗಿ,
ಅವರ ಗೋಣಿಗಳ ತುಂಬಿ,
ಹೊಟ್ಟೆ ಬಿರಿಯೆ ಸುರಿದು
ತಾವ್ಹಸಿದು,ನೋವಿನಲೂ ನಕ್ಕವರು.

ಮಳೆ ಇಲ್ಲದೆ ಬೆಳೆದು
ಕೈಕೆಸರಾಗದೆ ಮೊಸರುಂಡವರ
ಅಕ್ಷರದ ಅಟ್ಟಹಾಸಕೆ ಹೆದರಿ
ಹಿಂಜರಿದವರು.
ಬೇವಿನಂತೆ ಚಿಗುರುತ್ತಾರೆ.
ಕಾಗೆಗೂಬೆಗಳೊಡನೆ ಹಾಡುತ್ತಾರೆ.
ಕೆಸರಿನೊಂದಿಗೆ ತಂಪಾಗುತ್ತಾರೆ.
ಬಿಸಿಲಿನೊಂದಿಗೆ ಒಣಗುತ್ತಾರೆ.
ವ್ಯತಿರಿಕ್ತವಾದ ಎಲ್ಲವನ್ನೂ ಸಹಿಸಿ
ಬದುಕ ಸಾಗಿಸುತ್ತಾರೆ.

ಸಿಮೆಂಟ್ ಕಾಡಿನವರ ಗುರಿಗಳು
ಇವರಿಗೆ ಗೋರಿಗಳಾದರೂ,
ದುಡಿಯುವ ಕೈಗಳಲ್ಲದೆ
ಬಿತ್ತುವ ಬೀಜವೂ ಆದವರು.
ಕಾಳು ತುಂಬುವ ಕಣಜವಲ್ಲದೆ
ಬೆಳೆಯುವ ಭೂಮಿ ಆದವರು
ಇವರು
ಬೆಳೆಯುವ ಭೂಮಿಯೂ ಆದವರು.
         *
                                                                                         









ಆದ್ಯಂತಗಳ ನಡುವಿನ ಅರ್ಧಸತ್ಯ

ನಿನ್ನ ಹಾಗೇಯೇ.......
ಮತೇರಿಸುವ ಕಂಗಳಲ್ಲಿ
ಬೆಸೆಯಬೇಕಿತ್ತೇ ಭಾವಗಳ?
ಹೊಗೆಸುತ್ತಿದ ತುಟಿಗಳ
ಚುಂಬಿಸಬೇಕಿತ್ತೇ?
ಪಾಪದ ಪಿಂಡಗಳ ಹೆರಲು
ತಿಟೆ ತೀರಿಸಲೇ ಬೇಕೆ?

ನಿನ್ನ ಹಾಗೆಯೇ......
ಘಮ್ಮೇನ್ನುವ ಗಬ್ಬು ನಾತಕ್ಕೆ
ಮೂಗು ಕಟ್ಟಿದರೂ
ಇಕ್ಕಟ್ಟಿನಲ್ಲೂ ಉಸಿರಬೇಕಿತ್ತೇನೆ?
ಗೆಳತಿ............................
ವಿಕೃತವಾದರೂ ಬದುಕ
ತಬ್ಬಿಕೊಳ್ಳಬೇಕಿತ್ತೇ?
ಅಂಧಕ್ಕಾರದಲ್ಲೂ ಹೃದಯ
ಬಿಚ್ಚಬೇಕಿತ್ತೇನೇ?
ಸಂಪ್ರದಾಯಕೆ
ಬಲಿಯಾಗಲೇಬೇಕೆ ಜೀವ?

ಒಂಟಿಯಾಗಿ ಸುರಿಸಿದ್ದು
ಬೆವರಲ್ಲವೇ?
ಏಕಾಂಗಿಯಾಗಿ ನೆರಳಿದ್ದು
ನೋವಲ್ಲವೆ?
ಒಂಟಿ ಹಕ್ಕಿಯ ಹಾಡಿಗೆ
ಎಲ್ಲವೂ ಕಿವುಡೆ?

ಅತಂತ್ರ ದಂಡೆಯ ಮೇಲೆ
ಪರತಂತ್ರ ಬದುಕಿನ
ತನನ ತಾಣಗಳಿಗೆ
ಹೆಜ್ಜೆ ಹೊಂದಿಸಿದ್ದರೆ......
ದುಡಿದ ದುಡಿತಗಳು
ನೊಂದ ನೋವುಗಳು
ಬೇಡುವ ಬಯಕೆಗಳು
ನಿನ್ನ, ನಿನ್ನಂಥವರ
ಅರ್ಥಹೀನ ದೃಷ್ಟಿಯಲ್ಲಿ
ನಿಜವಾಗುತ್ತಿದ್ದುವೇನೋ?
ಅವಕ್ಕೆ ಮೌಲ್ಯವಿರುತ್ತಿತ್ತು.
ಹೌದೇನೇ?

ಹಾಗಿದ್ದರೆ ಹೇಳೇ...........
ಹಾಗಿದ್ದರೆ ಹೇಳೇ
ಕಣ್ಣಿದ್ದು ಕುರುಡಾಗಿ
ಕಿವಿಯಿದ್ದು ಕಿವುಡಾಗಿ
ವಿಚಾರ ಶೂನ್ಯಳಾಗಿ
ಅಖಂಡ ಸತ್ಯದ ಆದ್ಯಂತಗಳ ನಡುವಿನ
ಪಂಚೇಂದ್ರೀಯ ರಹಿತ ಮುತ್ತೈದೆ.........
ಬದುಕು ಬಳಲಿತೇಕೇ
ಹೀಗೇ ಏಕಾಂಗಿಯಾಗಿ...............?
ಬಲಿಯಾಯಿತೇಕೇ
ಒಬ್ಬಂಟಿಯಾಗಿ................?
ಹೇಳೇ.................
ಅದು ತುಂಬು ಬದುಕೇ ?
ಹೇಳೇ.................
ಅದು ತುಂಬು ಬದುಕೇ                            
           *




*
ವಿದ್ಯಾ ಕುಂದರಗಿ,
ಉಪನ್ಯಾಸಕರು,
ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ,
ಧಾರವಾಡ - 9900221367


                                           ಅಂಬರದೊಳಗನ ಅಕ್ಕಮಹಾದೇವಿಯರು    
                                                                       ವಿದ್ಯಾ ಕುಂದರಗಿ

ಬಹಿರಂಗದಲಿ,
ಬದುಕ  ಸಾಮ್ರಾಜ್ಯದೊಳಗೆ
ಅರಮನೆಯ ಮೃಗಗಳಿಗಂಜಿ,
ಉಡುತಡಿಯ ಅಡಿಅಡಿಯಲ್ಲೂ
ಉದರ ಪಾತಕಗಳ ಬೆನ್ನಿಗೆ ಕಟ್ಟಿಕೊಂಡೇ
ಅಟ್ಟಾಡಿಸಿ ದುಡಿದರೂ
ಹಸಿವೆಗೆ ಅಟ್ಟುಂಡು
ತೃಷೆಗೆ ಸೇದಿ ಕುಡಿದರೂ
‘ನಾನೇ ಆಳರಸ...’ಎನುವ
ಕೌಶಿಕ ಭಾವಗಳ ತೃಷೆಗೆ
ತಂಪೆರೆದ ಜೀವನದಿ,
ಮತ್ತೆ ಹಳಿಯುತ್ತೇವೆ ದುರ್ವಿಧಿ.

ಹೊರಗೊರಗೆ,
ಮುಕ್ತಳಾಗಿದ್ದಾಳೆ,
ಮೆರವಣಿಗೆ ಹೊರಟಿದ್ದಾಳೆ,
ಬಂಧನ ಕಳಚಿದ್ದಾಳೆ....
ಎಂದು ಭೋರಿಡುತ್ತಲೇ
ಪೊರೆ ಕಳಚಿದ ಭಾವ ......

ಹೃದಯ ಹಂದರದೊಳಗೆಲ್ಲೊ
ಸೀತೆ, ಸಾವಿತ್ರಿ, ರೇಣುಕೆ, ಮಂಡೋದರಿಯರ
ಮಹಾ ಸತಿತ್ವ ಮೊರೆತ.....
ಅಹಲ್ಯೆ, ಊರ್ಮಿಳೆ, ಶಬರಿಯರ
ಪವಿತ್ರಾತ್ಮದ ಕೊರೆತ......
ಅಂಬೆ,ಕುಂತಿ,ದ್ರೌಪದಿಯರ
ಪ್ರಯೋಗ ಪಥ.....
ಎಲ್ಲರ ತಲ್ಲಣ,ತನನ,ರಣರಣ.

ಥೇಟ್ ಪಡಿಯಚ್ಚುಗಳು
ನಾವು
ಎನೇಂದರೇನು?
ರಣಭಯಂಕರ ಅಭಯಾರಣ್ಯದೊಳಗೆ
ಹಂಬಲದ ಗೂಡು ಕಟ್ಟಿ,
ಬಂಧಗಳ ಅಡಕಲೊಟ್ಟಿ,
ಭಾವಗಳ ಬೀಡುಬಿಟ್ಟಿರುವ ....
ಸಾಂತ್ವನದ ಬೆನ್ನು ತಟ್ಟಿರುವ
ನಾವು-ನೀವುಗಳು






ಅಂತರಂಗದೊಳಗೆ
ಆಸೆಯಳಿದು ಭಾವ ಬೆತ್ತಲಾದರೂ
ಮೈಸುತ್ತಿಕೊಂಡಿರುವ ಅಗಣಿತಸೂತ್ರಗಳ
ಭವಪಾಶ ಬಿಡಿಸಿಕೊಳ್ಳಲಾಗದ......,
ಬಂಧಮುಕ್ತ ಕದಳಿ ಕೂಡ
ಅಗಮ್ಯ,ಅಗೋಚರ,ಅಪ್ರತಿಮ
ಅರಸಿ ಹೊರಟ
ಅಂಬರದೊಳಗನ ಅಕ್ಕಮಹಾದೇವಿಯರು.

     *  ವಿದ್ಯಾ.ಕುಂದರಗಿ.